PërshkrimiObelisque. war memorial the final battale between tippu sultan and british forces in 1799 01.JPG
ಕನ್ನಡ: 1779 ರ ಮೇ 04 ರಂದು ಬ್ರಿಟೀಷರು ಶ್ರೀ ರಂಗ ಪಟ್ಟಣ ಕ್ಕೆ ಮುತ್ತಿಗೆ ಹಾಕಿ ಕೋಟೆಗೆ ಲಗ್ಗೆ ಇಟ್ಟ ದಿನ . ಯಾರಿಗೂ ಜಗ್ಗದ ಶ್ರೀ ರಂಗ ಪಟ್ಟಣದ ಅಭೇದ್ಯ ಕೋಟೆ ಅಂದು ಮಧ್ಯಾಹ್ನ 1 -00 ಘಂಟೆ ವೇಳೆಗೆ ಬ್ರಿಟೀಷರ ತೂಫಾನಿಗೆ ಬಲಿಯಾಗಿತ್ತು.ನಂತರ ನಡೆದದ್ದು ಬ್ರಿಟೀಷರ ಗೆಲುವು " ಟಿಪ್ಪೂ ಸುಲ್ತಾನ್" ಶರಣಾಗದೆ ಯುದ್ದದಲ್ಲಿ ಮರಣಹೊಂದಿದ್ದು ಇತಿಹಾಸ ಎಲ್ಲರಿಗೂ ತಿಳಿದಿದೆ.
ಅಂದಿನ ಯುದ್ದದ ಗೆಲುವಿನ ಸ್ಮರಣಾರ್ಥ ಮೈಸೂರು ಸರ್ಕಾರವು ಯುದ್ದ ಸ್ಮಾರಕ ನಿರ್ಮಿಸಿದೆ .ಶ್ರೀ ರಂಗ ಪಟ್ಟಣದ ದ್ವೀಪದ ಪಶ್ಚಿಮ ಕೋಟೆ ತುದಿಯಲ್ಲಿರುವ ಈ ಜಾಗ ದಲ್ಲಿ ಕಾವೇರಿ ನದಿಯು ಎರಡು ಸೀಳಾಗಿ ಒಡೆದು ಶ್ರೀ ರಂಗ ಪಟ್ಟಣವನ್ನು ತಬ್ಬಿಕೊಂಡು ಹರಿದು ಸಂಗಮದಲ್ಲಿ ಎರಡೂ ಸೀಳು ಗಳನ್ನೂ ಮತ್ತೆ ಸೇರಿಸಿಕೊಂಡು ಸಾಗುತ್ತಾಳೆ.ಈ ಯುದ್ದ ಸ್ಮಾರಕದಲ್ಲಿ ಕೆಳಗಡೆ ವೃತ್ತಾಕಾರದಲ್ಲಿ ಕಲ್ಲಿನ ಅಡಿಪಾಯ ಹಾಕಿ ಅದರಮೇಲೆ ವಿಶಿಷ್ಟ ಆಕಾರದಲ್ಲಿ ಕಲ್ಲಿನ ಕೆತ್ತನೆ ಮಾಡಿ ಗ್ರಾನೈಟ್ ಕಲ್ಲಿನ ಫಲಕಗಳನ್ನು ನಾಲ್ಕೂ ಕಡೆ ಪ್ರದರ್ಶಿಸಲಾಗಿದೆ.ಫಲಕದ ಕಲ್ಲಿನ ಮೇಲೆ ನಾಲ್ಕೂ ಕಡೆ ಕಲ್ಲಿನ ಗುಂಡುಗಳನ್ನು ಅಲಂಕಾರಕ್ಕೆ ಇಟ್ಟು[ ಈ ಕಲ್ಲಿನ ಗುಂಡುಗಳನ್ನು ಅಂದಿನ ಯುದ್ದಗಳಲ್ಲಿ ಬಳಸುತ್ತಿದ್ದ ನೆನಪಿಗೆ ]ಅದರಮೇಲೆ ನುಣುಪು ಕಲ್ಲಿನ ಗೋಪುರ ವಿದ್ದು ನೋಡಲು ಸುಂದರವಾಗಿದೆ. ಒಂದು ಶತಮಾನ ಪೂರೈಸಿರುವ ಈ ಸ್ಮಾರಕ ಬಹಳಷ್ಟು ಹವಾಮಾನ ವೈಪರೀತ್ಯ ಅನುಭವಿಸಿ ಇಂದಿಗೂ ಇತಿಹಾಸ ಸಾರುತ್ತಾ ನಿಂತಿದೆ.ಬನ್ನಿ ಪರಿಚಯ ಮಾಡಿಕೊಳ್ಳೋಣ. ಮೊದಲ ಪಾರ್ಶ್ವದಲ್ಲಿ ಈ ಸ್ಮಾರಕ ನಿರ್ಮಿಸಿದ ಉದ್ದೇಶ ತಿಳಿಸಲಾಗಿದ್ದು ಅದನ್ನು 1907 ರಲ್ಲಿ ಅಂದಿನ ಮೈಸೂರು ಸರ್ಕಾರ ನಿರ್ಮಿಸಿದೆ.
ta shpërndani – ta kopjoni, rishpërndani dhe përcillni punën
t’i bëni “remix” – të përshtatni punën
Sipas kushteve të mëposhtme:
atribuim – Duhet t’i jepni meritat e duhura, të siguroni një lidhje për tek licenca dhe të tregoni nëse janë bërë ndryshime. Këtë mund ta bëni në ndonjë mënyrë të arsyeshme, por jo në ndonjë mënyrë që sugjeron se licencuesi ju del zot juve apo përdorimit tuaj.
share alike – Nëse bëni një “remix”, e shndërroni, ose ndërtoni duke u bazuar te materiali, duhet t’i shpërndani kontributet tuaja sipas të njëjtës licencë ose një të tille të përputhshme me origjinalen.